Tuesday, March 17, 2026
ಸುದ್ದಿ

ರಾಜ್ಯದಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತಿದರೆ ಕೇಸ್ :- ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಬೆಳ್ತಂಗಡಿ : ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದೌರ್ಜನ್ಯಕ್ಕೀಡಾದ ಬಡಕುಟುಂಬದ ಪರ ನಿಂತ ಶಾಸಕ ಹರೀಶ್ ಪೂಂಜಾ ಅವರ ಮೇಲೆಯೇ ಸರ್ಕಾರ, ತನ್ನ ಅಧಿಕಾರಿಗಳ ಮುಖಾಂತರ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

“ಇಲ್ಲಿ ಬಡವರು ಕಟ್ಟಿಕೊಂಡ ಮನೆಯನ್ನು ತೆರವುಗೊಳಿಸುವ ಮೊದಲು ನ್ಯಾಯಯುತವಾಗಿ ಅಳತೆ ಮಾಡಿಸಿ. ಅದು ಅರಣ್ಯ ಪ್ರದೇಶವಾಗಿದ್ದರೆ ತೆರವುಗೊಳಿಸಿ, ಅಲ್ಲದಿದ್ದರೆ ತೆರವುಗೊಳಿಸಬೇಡಿ” ಎಂದು ಹೇಳಿದ್ದರಲ್ಲಿ ತಪ್ಪೇನಿದೆ.? ಅರಣ್ಯಾಧಿಕಾರಿಗಳಿಂದ ತನ್ನ ಕ್ಷೇತ್ರದ ಬಡ ಕುಟುಂಬಕ್ಕೆ ಆಗುತ್ತಿದ್ದ ದೌರ್ಜನ್ಯವನ್ನು ಪ್ರಶ್ನಿಸುವ ಹಕ್ಕು ಸಂವಿಧಾನಬದ್ಧವಾಗಿ ಕ್ಷೇತ್ರದ ಶಾಸಕನಾದವರಿಗೆ ಇದೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿ ಆ ಹಕ್ಕಿಗೆ ಅಡ್ಡಿ ಉಂಟು ಮಾಡುತ್ತಿರುವುದು ಸರ್ವಾಧಿಕಾರಿ ಧೋರಣೆಯ ಪ್ರತೀಕ. ಪ್ರಜಾಪ್ರಭುತ್ವದಲ್ಲಿ ಇದು ಬಹಳ ದಿನ ನಡೆಯುವುದಿಲ್ಲ ಎಂದರು.
ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಮಾಡಿ ಪುಟ್ಟ ಪುಟ್ಟ ಮಕ್ಕಳ ಶಿರಚ್ಛೇದ ಮಾಡಿದ್ದರೂ, ಅವರ ಬೆಂಬಲಕ್ಕೆ ಸಮರ್ಥನೆಗೆ ನಿಲ್ಲುವ ಮತಿಹೀನ ಕಾಂಗ್ರೆಸ್ ಪಕ್ಷದಿಂದ ಇದಕ್ಕಿಂತ ಬೇರೆ ರೀತಿಯ ಆಡಳಿತ ನಿರೀಕ್ಷಿಸಲು ಸಾಧ್ಯವೇ? ಬೇರೆ ದೇಶದ ಉಗ್ರರ ಪರ ಕಣ್ಣೀರು ಸುರಿಸುವ ಇವರಿಗೆ ಇಲ್ಲಿನ ಬಡ ಕುಟುಂಬಗಳ ರೋಧನೆ ಕಾಣುತ್ತಿಲ್ಲ. ಕಳೆದ 75 ವರ್ಷಕ್ಕಿಂತ ಹಿಂದಿನಿAದಲೂ ಯಾವುದೇ ಸಮಸ್ಯೆ ಇಲ್ಲದೇ ಇಲ್ಲಿಯೇ ಬದುಕು ನಡೆಸಿದ್ದ ಹಿರಿಯ ಬಡ ಜೀವಗಳನ್ನು ಕಾಂಗ್ರೆಸ್ ಸರ್ಕಾರ ಏಕಾಏಕಿ ಒಕ್ಕಲೆಬ್ಬಿಸುವುದು ನ್ಯಾಯಯುತವಾದುದಲ್ಲ ಎಂದರು.
ಈಗಾಗಲೇ ರಾಜ್ಯದಲ್ಲಿ ಆಡಳಿತದ ಹಳಿ ತಪ್ಪಿದ್ದು ಜನರು ಸರ್ಕಾರದ ಮೇಲೆ ಆಕ್ರೋಶ ಹೊಂದಿದ್ದಾರೆ. ಸರ್ಕಾರ ಇಲ್ಲ ಸಲ್ಲದ ಗೊಂದಲ ಸೃಷ್ಟಿಸಿ ಆ ಆಕ್ರೋಶವನ್ನು ಅಧಿಕಾರಿಗಳ ಮೇಲೆ ವರ್ಗಾಯಿಸುತ್ತಿದೆ. ಅಧಿಕಾರಿಗಳು ಕಾನೂನನ್ನು ಮೀರಿ ಸರ್ಕಾರವನ್ನು ಖುಷಿ ಪಡಿಸುವುದನ್ನು ಬಿಟ್ಟು ಕಾನೂನು ಪ್ರಕಾರ ಜನಪರ ಕಾರ್ಯ ನಿರ್ವಹಿಸಬೇಕು ಎಂದು ಎಚ್ಚರಿಸಿ, ಬಡ ಜನರ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡಿದ ಶಾಸಕ ಹರೀಶ್ ಪೂಂಜಾರವರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಪ್ರಕರಣವನ್ನು ಈ ಕೂಡಲೇ ಕೈಬಿಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು