Monday, June 15, 2026
ಸುದ್ದಿ

ಕಡಬ: ಕಾಡಾನೆ ದಾಳಿಗೆ ಮೇಯಲು ಬಿಟ್ಟಿದ್ದ ಹಸು ಬಲಿ- ಕಹಳೆ ನ್ಯೂಸ್

ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ನಡೆದಿದೆ.
ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆಯೂ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನμÉ್ಟೀ ಲಭ್ಯವಾಗಬೇಕಿದೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು