Recent Posts

Saturday, April 25, 2026
ದಕ್ಷಿಣ ಕನ್ನಡರಾಜ್ಯಸುದ್ದಿ

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ ; ಕಾಟಿಪಳ್ಳದ ಆಯೇಷಾಳನ್ನು ಪ್ರೀತಿಸಿ ವಿವಾಹವಾದ ಪ್ರಶಾಂತ್..!! – ಕಹಳೆ ನ್ಯೂಸ್

ಸುರತ್ಕಲ್, ಡಿ 08 :  ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ.


ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರಿಬ್ಬರು ವಿವಾಹವಾಗಿದ್ದಾರೆ ಎನ್ನುವ ಪೋಟೋವನ್ನು ಅವರ ಮಿತ್ರರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

ಅಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಕುಟೂಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂಡೆ ಸ್ಥಳೀಯದವರಾಗಿದ್ದು , ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.