ಆರ್.ಎಸ್.ಎಸ್. ಹಿರಿಯ ಮುಖಂಡರು, ಅಯೋಧ್ಯೆ ಹೋರಾಟದಲ್ಲಿ ದಕ್ಷಿಣ ಭಾರತದಿಂದ ಪ್ರಮುಖ ಪಾತ್ರವಹಿಸಿದ್ದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಅಯೋಧ್ಯೆಗೆ ಆಮಂತ್ರಣ – ಕಹಳೆ ನ್ಯೂಸ್

ಮಂಗಳೂರು : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರಿಗೆ ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆ ನೀಡಲಾಯಿತು.
ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪುವೆಲ್, ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ,ವಿಭಾಗ ಬಜರಂಗದಳ ಸಂಯೋಜಕರಾದ ಭುಜಂಗ ಕುಲಾಲ್, ಸಹಸಂಯೋಜಕ ಪುನೀತ್ ಅತ್ತಾವರ ಹಾಗೂ ಪ್ರಮುಖರು ಉಪಸ್ಥಿತಿ ಇದ್ದರು.















