Sunday, March 8, 2026
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ.

ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ ಕಂಬಳ ಕ್ರೀಡೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕಂಬಳ ತುಳುನಾಡಿನ ಜನಪದ ಕ್ರೀಡೆಯಾಗಿದ್ದು ಅದನ್ನು ಉಳಿಸಿಕೊಂಡು ಹೋಗುವಲ್ಲಿ ತುಳುನಾಡಿನ ಕಂಬಳ ಪ್ರಿಯರು ಯಶಸ್ವಿಯಾಗಿದ್ದಾರೆ. ಕಂಬಳ ಕ್ರೀಡೆಯನ್ನು ನಡೆಸಬೇಕಾದರೆ ಲಕ್ಷಾಂತರ ರೂ ಖರ್ಚುಗಳಿರುತ್ತದೆ. ಕಂಬಳಕ್ಕೆ ಸರಕಾರ ಕನಿಷ್ಠ 5 ಲಕ್ಷ ರೂ ಅನುದಾನವನ್ನು ನೀಡುವ ಮೂಲಕ ಪುರಾತನ ಜನಪದ ಕ್ರೀಡೆಯನ್ನು ಉಳಿಸುವಲ್ಲಿ ಸರಕಾರ ಸಹಕಾರವನ್ನು ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ಸರಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಂಗಳೂರು ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ಮುರಳೀಧರ್ ರೈ ಮಠಂತಬೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು