ನಂದಿಕೇಶ್ವರ ಭಜನಾ ಮಂಡಳಿ ಇದರ ಸಹಕಾರದಿಂದ ರಾಷ್ಟ್ರೀಯ ಹೆದ್ದಾರಿ ಕಟಪಾಡಿ ಪೊಸಾರ್ ಸರ್ವಿಸ್ ರಸ್ತೆ ಬಳಿ ನಿರ್ಮಿಸಿರುವ “ನಂದಿಕೇಶ್ವರ ಬಸ್ಸು ತಂಗುದಾಣ”ವನ್ನು ಇಂದು ದಿನಾಂಕ 21-01-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಕಿಣಿ, ಕವಿತಾ, ಸುಮಂತಾ, ಸುಭಾಸ್ ಬಲ್ಲಾಳ್, ರಾಜೇಶ್ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುರ್ಣ, ಶಂಕರ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಆಶಾ, ನಂದಿಕೇಶ್ವರ ಭಜನಾ ಮಂಡಳಿ ಅಧ್ಯಕ್ಷರಾದ ಶಂಭು ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಭಾಸ್ಕರ್ ಹಾಗೂ ಪ್ರಮುಖರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.














