Sunday, March 8, 2026
ಕಾಸರಗೋಡುಬದಿಯಡ್ಕಸಂತಾಪಸುದ್ದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ.

ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ ಪೂರ್ಣಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಅಂತಿಮ ವಿಧಿವಿಧಾ‌ನಗಳು ಉಪ್ಪಳ ಸಮೀಪದ ಬಂದ್ಯೋಡು ಮನೆಯಲ್ಲಿ ಬೆಳಗ್ಗೆ 11:00ಕ್ಕೆ ನಡೆಯಲಿದೆ.

ಜಾಹೀರಾತು
ಜಾಹೀರಾತು

ಆರ್ ಎಸ್ ಎಸ್ ಸಂತಾಪ: ಅಗಲಿದ ಗೋಪಾಲ್ ಚೆಟ್ಟಿಯಾರ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸಂದೇಶ:

ಶ್ರೀ ಗೋಪಾಲ ಚೆಟ್ಟಿಯಾರರ ನಿಧನದ ಸುದ್ದಿ ಅತೀವ ದುಃಖಕರ. ಅವರ ಕುಟುಂಬಕ್ಕೆ ಹಾಗೂ ಪರಿಚಿತರು, ಅಭಿಮಾನಿಗಳಿಗೆ ನನ್ನ ತೀವ್ರ ಸಂತಾಪಗಳು. ಸಂಘಕಾರ್ಯಕ್ಕೆ ಜೀವನ ಮುಡಿಪಿಟ್ಟು ಸಮಾಜದ ಹಲವು ಮುಖಗಳಲ್ಲಿ ಸಕ್ರಿಯರಾಗಿದ್ದು ಮೌನ ತಪಸ್ಸು ಗೈದ ಚೆಟ್ಟಿಯಾರರು ಆದರ್ಶ ಸ್ವಯಂಸೇವಕರಾಗಿ ಬದುಕಿದರು. ಅಂಥ ಶ್ರೇಷ್ಠ ಜೀವನಕ್ಕೆ ನಮನಗಳು. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಪರಮಾತ್ಮ ಗತಿಸಿದ ಆತ್ಮಕ್ಕೆ ಸದ್ಗತಿ ನೀಡಲಿ. ತಿಳಿಸಿದ್ದಾರೆ.