Saturday, March 7, 2026
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮoಗಳಗoಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ನಡೆಸಲಾಯಿತು. ಮಾನ್ಯ ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ
ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಇದಕ್ಕೆ ಪ್ರತಿಕ್ರಿಸಿದವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆನೀಡಿದರು. ಸಂಘದ ಅಧ್ಯಕ್ಷ ಹೆಚ್ ವಿಜಯರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ
ಎo.ಬಿ, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸರ್ವ ಸದಸ್ಯರು ಉಪಸ್ಥಿತರಿದ್ದರು.