ಪುತ್ತೂರು : ನೆಕ್ಕರೆ ನಿವಾಸಿ ಕೃಷ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ನಿವಾಸಿ ಆಟೋ ರಿಕ್ಷಾ ಚಾಲಕರೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.26ರಂದು ಬೆಳಕಿಗೆ ಬಂದಿದೆ.

ನೆಕ್ಕರೆ ನಿವಾಸಿ ಕೃಷ್ಣಪ್ಪ ಪೂಜಾರಿ (55) ಮೃತ ಆಟೋ ಚಾಲಕ.
ಕೃಷ್ಣಪ್ಪ ಪೂಜಾರಿ ಅವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.














