Recent Posts

Saturday, April 25, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಾಲೆತ್ತೂರು ವಲಯದ ಕೊಲ್ನಾಡು ಗ್ರಾಮದ ಕುಲಾಲ್ ದಾಸಗಿರಿ ಭಜನಾ ಮಂದಿರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಮಂಜೂರಾತಿ ಪತ್ರದ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಸಾಲೆತ್ತೂರು ವಲಯದ ಕೊಲ್ನಾಡು ಗ್ರಾಮದ ಕುಲಾಲ್ ದಾಸಗಿರಿ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಎರಡು ಲಕ್ಷದ ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಚೆನ್ನಪ್ಪ ಗೌಡರವರು ಭಜನಾ ಮಂದಿರದ ಆಡಳಿತ ಮಂಡಳಿಯವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭ ವಲಯದ ವಲಯ ಮೇಲ್ವಿಚಾರಕರಾಕಿ ಮೋಹಿನಿ, ನಿಕಟ ಪೂರ್ವ ಅಧ್ಯಕ್ಷರಾದ ರಂಜಿತ್ ಪೂಜಾರಿ, ಭಜನಾ ಮಂದಿರದ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಕಾರ್ಯದರ್ಶಿನಿತ್ಯಾನಂದ, ಸಂಚಾಲಕ ಆನಂದ ಪೂಜಾರಿ, ಜಯಪ್ರಸಾದ್, ಚಿನ್ನಪ್ಪ ಗೌಡ, ಶೀನ ಗೌಡ, ಗಿರೀಶ್ ಆಚಾರ್ಯ, ಸಂಕಪ್ಪ ಪೂಜಾರಿ, ಪ್ರೇಮಲತಾ, ಮೊದಲಾದವರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು