Tuesday, May 21, 2024
ಸುದ್ದಿಹೆಚ್ಚಿನ ಸುದ್ದಿ

ಚಾಮುಂಡೇಶ್ವರಿ ಯುವಕ ಮಂಡಲ ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ವಿವೇಕಾನಂದನಗರ, ಮೈರೊಳ್ತಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಲೋಕಾರ್ಪಣೆ – ಕಹಳೆ ನ್ಯೂಸ್

ಬಂದಾರು : ಹಲವಾರು ವರ್ಷಗಳಿಂದ ಬಹುಬೇಡಿಕೆಯ ಬಸ್ ನಿಲ್ದಾಣಕ್ಕೆ ಮುಕ್ತಿ ಸಿಕ್ಕಿದೆ.ಚಾಮುಂಡೇಶ್ವರಿ ಯುವಕ ಮಂಡಲ ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಬಸ್ ತಂಗುದಾಣ ಮಾರ್ಚ್ 17 ರಂದು ಲೋಕಾರ್ಪಣೆಗೊಂಡಿತು. ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವವ ಮೂಲಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮಧರ್ಶಿಗಳಾದ ಆನಂದ ಗೌಡ, ಮೈರೋಳ್ತಡ್ಕ ಶಿವಶಕ್ತಿ ಜನರಲ್ ಸ್ಟೋರ್ ಮಾಲಕರಾದ ಗುರುಪ್ರಸಾದ್ ಕುರಾಯ, ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಅಧ್ಯಕ್ಷರಾದ ಅಶ್ವಥ್ ಗೌಡ, ಕಾರ್ಯದರ್ಶಿ ಉದಯ ಮಿತ್ಯೋಡಿ, ಊರಿನ ಹಿರಿಯರು, ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ರಾಮಫಲ ಗಿಡ ವಿತರಣೆ ಮಾಡಲಾಯಿತು ಹಾಗೂ ನೂತನ ಬಸ್ ನಿಲ್ದಾಣದ ಬಳಿ ಗಿಡ ನೆಡುವ ಮೂಲಕ ಹಾಗೂ ಬಸ್ ನಿಲ್ದಾಣ ಸುತ್ತ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಚಿತ್ರಣ ಅಳವಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು