Wednesday, July 29, 2026
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ – ಕಹಳೆ ನ್ಯೂಸ್

ಮಂಗಳೂರು : ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬAಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.