Thursday, March 12, 2026
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(15) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೆÇಲೀಸ್ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು