Thursday, March 12, 2026
ದಕ್ಷಿಣ ಕನ್ನಡರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಯಲ್ಲಿ ಸಾಗಿ ಬಂದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ. ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಅರುಣ್ ಕುಮಾರ್ ಪುತ್ತಿಲ, ಹರೀಶ್ ಪೂಂಜಾ ಸಹಿತ ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು