Recent Posts

Saturday, May 4, 2024
ಕೇರಳಸಿನಿಮಾಸುದ್ದಿ

ದೇಶದಾದ್ಯಂತ ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ– ಕಹಳೆ ನ್ಯೂಸ್

ತಿರುವನಂತಪುರ : ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು

‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್‌ ಬಳಿ ಕೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

‘ಜನರ ಮನಸ್ಸಿನಲ್ಲಿ ದ್ವೇಷ ತುಂಬುವ ಇಂತಹ ಚಲನಚಿತ್ರಗಳ ಪ್ರದರ್ಶನ ಖಂಡನೀಯ, ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರದ ನಿರ್ಧಾರದಿಂದ ಹಿಂದೆ ಸರಿಯಿರಿ. ದ್ವೇಷ ಬಿತ್ತುವ ಇಂತಹ ದುರುದ್ದೇಶಪೂರಿತ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕೇರಳ ದೃಢವಾಗಿ ನಿಲ್ಲುತ್ತದೆ’ ಎಂದು ಸಿಎಂ ಪಿಣರಾಯಿ ವಿಜಯನ್‌ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು

ಏಪ್ರಿಲ್‌ 5 ರಂದು ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಪ್ರಸಾರ ಮಾಡುವುದಾಗಿ ದೂರದರ್ಶನ ಘೋಷಣೆ ಮಾಡಿತ್ತು.

ಜಾಹೀರಾತು
ಜಾಹೀರಾತು