Wednesday, July 29, 2026
ಉಡುಪಿಸುದ್ದಿ

ಉಡುಪಿ : ಲಾರಿ – ಬೈಕ್ ಅಪಘಾತ : ಸವಾರ ಮೃತ್ಯು – ಕಹಳೆ ನ್ಯೂಸ್

ಉಡುಪಿ : ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‍ಎಚ್) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು.