Thursday, May 2, 2024
ರಾಜಕೀಯಶಿವಮೊಗ್ಗಸುದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ. ವೈ. ರಾಘವೇಂದ್ರ – ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶ್ರೀ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಉಡುಪಿ ನಿಕಟಪೂರ್ವ ಶಾಸಕರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು.

ಜಾಹೀರಾತು
ಜಾಹೀರಾತು

ಬಿಜೆಪಿ – ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ನಿಂದ – ಗೋಪಿ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ಬಳಿಕ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು, ಎಚ್ ಡಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ಕೋಲಾರ ಸಂಸದರಾದ ಮುನಿಸ್ವಾಮಿ ಶಾಸಕರುಗಳಾದ ಆರಗ ಜ್ಞಾನೇಂದ್ರ, ಎಸ್ ಎನ್ ಚನ್ನಬಸಪ್ಪ, ಡಿ ಎಸ್ ಅರುಣ್, ಶಾರದಾ ಪೂರ್ಯಾನಾಯ್ಕ್, ಗುರುರಾಜ್ ಗಂಟಿಹೊಳೆ, ಎಸ್ ರುದ್ರೇಗೌಡ್ರು, ಶ್ರೀಮತಿ ಭಾರತಿ ಶೆಟ್ಟಿ, ಎಸ್ ಎಲ್ ಭೋಜೆಗೌಡ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಎಂ ಬಿ ಭಾನುಪ್ರಕಾಶ್, ಕೆ.ಬಿ.ಅಶೋಕ್ ನಾಯ್ಕ್, ಆರ್ ಕೆ ಸಿದ್ದರಾಮಣ್ಣ, ಮೋನಪ್ಪ ಭಂಡಾರಿ, ಕೆ ಜೀ ಕುಮಾರ ಸ್ವಾಮಿ, ಪ್ರಮುಖರಾದ ಎಸ್ ದತ್ತಾತ್ರಿ, ಗಿರೀಶ್ ಪಟೇಲ್, ಎ ಎನ್ ನಟರಾಜ್, ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು