Saturday, May 4, 2024
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ.

ಜಾಹೀರಾತು
ಜಾಹೀರಾತು

ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ ದಂಪತಿಯ ಪುತ್ರಿ. ವಿಷ್ಣು ಕುಣಿಗಲ್ ಅವರು ವೆಂಕಟೇಶ್, ರಾಜೇಶ್ವರಿ ದಂಪತಿ ಪುತ್ರಿ.

ಜಾಹೀರಾತು
ಜಾಹೀರಾತು
ಜಾಹೀರಾತು

ರನ್ನರ್ ಅಪ್ ಮಹಾಲಕ್ಷ್ಮಿ, ಸೆಕೆಂಡ್ ರನ್ನರ್ ಅಪ್ ಇಂಚರ ಟ್ರೋಫಿ ಗೆದ್ದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು

ಬಹುಮುಖ ಪ್ರತಿಭೆ ರಿಷಿಕಾ :

ಜಾಹೀರಾತು
ಜಾಹೀರಾತು

ಅಲ್ಲಮಪ್ರಭು ನಾಟಕದಲ್ಲಿ ಭಕ್ತಿ ಭಾವನಾತ್ಮಕ ವಚನ ಹೇಳುತ್ತಾ ಭಕ್ತಿಯ ಪರಾಕಾಷ್ಠೆ ತೋರಿದ್ದರು.
ತೀರ್ಪುಗಾರರಾದ ರವಿಚಂದ್ರನ್‌, ಲಕ್ಷ್ಮೀ, ರಚಿತಾರಾಮ್ , ರಂಗ ಮೇಷ್ಟ್ರು ಅರುಣ್‌ ಸಾಗರ್‌, ರಾಜು ತಾಳಿಕೋಟೆ ಅವರು ವಿಶೇಷವಾಗಿ ಮೆಚ್ಚಿಕೊಂಡಿದ್ದರು.
ವಿಷ್ಣು ಕುಣಿಗಲ್ ಕಾಮಿಡಿ ಸ್ಕಿಟ್ ಗಳಿಂದ ತೀರ್ಪುಗಾರರ ಮೆಚ್ಚುಗೆ ಜತೆಗೆ ಅಭಿಮಾನಿ ವರ್ಗ ಹೊಂದಿದ್ದರು. .

……
ತೀರ್ಪುಗಾರರು ಹೇಳಿದ್ದು….

ರಿಷಿಕಾ ಈ ಸೀಸನ್ ಫೇವರಿಟ್, ಸ್ಪಷ್ಟತೆ ಗೆ ಇನ್ನೊಂದು ಹೆಸರೇ ರಿಷಿಕಾ. ರಿಷಿಕಾ ಸ್ಟೇಜ್ ಮೇಲೆ ಬಂದ್ರೆ ಅದ್ಭುತ ಪರ್ಫಾರ್ಮೆನ್ಸ್ ಖಂಡಿತಾ ಇರುತ್ತೆ, ತಪ್ಪು ಹುಡುಕಿದ್ರೂ ಸಿಗಲ್ಲ

– ರವಿಚಂದ್ರನ್ ನಟ 

ರಿಷಿಕಾನ ನಂಬಿ ಯಾವ ಪಾತ್ರ ಕೂಡಾ ಕೊಡಬಹುದು. ಇಂಥ ಅದ್ಭುತ ಪ್ರತಿಭೆಯನ್ನು ಮಗಳಾಗಿ ಪಡೆದವರು ಅದೃಷ್ಟವಂತರು

ಲಕ್ಷ್ಮಿ  ( ಹಿರಿಯ ನಟಿ )

ಧ್ವನಿ ಮತ್ತು ಭಾವ ಭಂಗಿಯಲ್ಲಿ ರಿಷಿಕಾಗೆ ಸಾಟಿ ಬೇರೊಬ್ಬರಿಲ್ಲ. ಹುಡುಗಿ ಅಂಥ ನಂಬೋಕೆ ಆಗೊಲ್ಲ, ಆ ರೀತಿ ಪುರುಷ ಪಾತ್ರಗಳನ್ನು ಮಾಡುತ್ತಾಳೆ. 

– ರಚಿತಾರಾಮ್, ನಟಿ