Sunday, May 19, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಕಾಂಗ್ರೇಸ್ ನಿಂದ ಹಿಂದೂಗಳ ರಕ್ಷಣೆ ಸಾಧ್ಯವೇ” ಸಾಲೆತ್ತೂರಿನಲ್ಲಿ ನಡೆದ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಬಂಟ್ವಾಳ : ಚುನಾವಣೆ ದಿನ ಹತ್ತಿರ ಬರುತ್ತಿದ್ದಂತೆ ಹಿಂದೂಗಳನ್ನು ಯಾವ ರೀತಿ ತುಚ್ಚವಾಗಿ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೇಸ್ ನೋಡುತ್ತಿದೆ ಎಂಬುದು ಎಲ್ಲರಿಗೆ ಕಾಣುತ್ತಿದೆ, ಇಂತಹ ಕಾಂಗ್ರೇಸ್ ನಿಂದ ಹಿಂದೂಗಳ ರಕ್ಷಣೆ ಸಾಧ್ಯವೇ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಶ್ನಿಸಿದರು. ಸಾಲೆತ್ತೂರಿನಲ್ಲಿ ನಡೆದ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಜಾಹೀರಾತು
ಜಾಹೀರಾತು

ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ , ರಾಷ್ಟ ವಿರೋಧಿಗಳಿಗೆ ಸಹಕಾರ ನೀಡುವ ಮಾನಸಿಕತೆಯ ಕಾಂಗ್ರೆಸ್ ನಮಗೆ ವಿರೋಧಿ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ನೆನಪಿರಲಿ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ದ.ಕ.ಜಿಲ್ಲೆಯಲ್ಲಿ ಎಲ್ಲರನ್ನು ಒಂದಾಗಿ , ಸಂಸ್ಕ್ರತಿಯನ್ನು, ಧರ್ಮವನ್ನು ಉಳಿಸುವ , ಹಿಂದುತ್ವದ ಆಧಾರದಲ್ಲಿ ಚುನಾವಣೆ ನಡೆಯಬೇಕು ಎಂದು ತಿಳಿಸಿದರು.ಇಂತಹ ಮಾನಸಿಕತೆಯ ಕಾಂಗ್ರೆಸ್ ಯಾವ ಮುಖದಲ್ಲಿ ಮತವನ್ನು ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಜಗತ್ತಿನ ಪ್ರಭಾವಿ ನಾಯಕನಾಗಿರುವ ಮೋದಿಯವರನ್ನು ಇನ್ನಷ್ಟು ಬಲಿಷ್ಠ ಮಾಡಲು ಬಿಜೆಪಿಗೆ ಮತನೀಡಿ ಎಂದು ಮನವಿ ಮಾಡಿದರು.

ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ ಆರ್ ಕೋಟ್ಯಾನ್,ಮಾಜಿ ಸಚಿವ ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತಾ.ಪಂ.ಮಾಜಿ ಸದಸ್ಯ ಮಾದವ ಮಾವೆ, ಚುನಾವಣಾ ಪ್ರಭಾರಿಗಳಾದ ಪೂಜಾ ಪೈ,ಜಗದೀಶ್ ಶೇಣವ, ಜಿಲ್ಲಾ ಕಾರ್ಯದರ್ಶಿ
ದೇವಪ್ಪ ಪೂಜಾರಿ, ಪ್ರಮುಖರಾದ ಸಂದೇಶ್ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.