Sunday, May 5, 2024
ಉಡುಪಿಕಾಪುಸುದ್ದಿ

ತಹಶೀಲ್ದಾರ್ ಮತ್ತು ಪೋಲೀಸರಿಂದ ಪಥಸಂಚಲನ” ” ಶಾಂತಿಯುತ ಚುನಾವಣೆಗೆ ಸರ್ವಸನ್ನದ್ದವಾಗಿದೆ ಕಾಪು ವಿಧಾನಸಭಾ ಕ್ಷೇತ್ರ” : “ನಿರ್ಭೀತಿಯಿಂದ ಮತ ಚಲಾಯಿಸಿ ” -ತಾಲ್ಲೂಕು ದಂಡಾಧಿಕಾರಿ ಪ್ರತಿಭಾ ಆರ್ – ಕಹಳೆ ನ್ಯೂಸ್

ಕಾಪು : ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿ,ಸೌಹಾರ್ದತೆಯಿAದ ಚುನಾವಣೆ ನಡೆಯಬೇಕು ಎಂಬ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ  ಕಾಪುವಿನ ಪೊಲಿಪು ಮಸೀದಿಯಿಂದ ಏ1 ಹೋಟೆಲ್ ವರೆಗೆ ಪಥಸಂಚಲನ ನಡೆಯಿತು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಥ ಸಂಚಲನದಲ್ಲಿ ಪೋಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಶ್ರೀ ಟಿ ಸಿದ್ದಲಿಂಗಪ್ಪ, ಆಙSP ಅರವಿಂದ್, ಸರ್ಕಲ್ ಇನ್ಸ್ಪೆಕ್ಟರ್ ಜಯಶ್ರೀ ಹಾಗೂ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು

ಮತದಾರರು ನಿರ್ಭೀತಿಯಿಂದ ಚುನಾವಣೆಯಲ್ಲಿ ಭಾಗವಹಿಸುವಂತೆ ಮಾಡಲು ಪೋಲೀಸ್ ಇಲಾಖೆ ಸಜ್ಜಾಗಿದ್ದು, ಮುಂಜಾಗ್ರತೆ ಮತ್ತು ಜನಜಾಗೃತಿ ಮೂಡಿಸುವ ಸಲುವಾಗಿ ಪೋಲೀಸ್ ಇಲಾಖೆಯ ಸಿದ್ದತೆ ಇದಾಗಿದ್ದು, ನಗರದಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ಜಾಹೀರಾತು
ಜಾಹೀರಾತು

ತಾಲ್ಲೂಕಿನ ದಂಡಾಧಿಕಾರಿಗಳಾದ ಡಾ.ಪ್ರತಿಭಾ ಆರ್ ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಟಿ ಸಿದ್ದಲಿಂಗಪ್ಪ ಇವರು ಸ್ವತಃ ಇಡೀ ಪಥಸಂಚನದಲ್ಲಿ ಭಾಗವಹಿಸಿದ್ದರಿಂದ ಜಾಗೃತಿ ಸಂದೇಶ ಪರಿಣಾಮಕಾರಿಯಾಗಿ ತಲುಪಿದೆ. ಕಾಪು ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನಡೆಯಲು ಕಂದಾಯ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಚುನಾವಣೆಯ ನೇತೃತ್ವ ವಹಿಸಿರುವ ತಹಶಿಲ್ದಾರ್ ಡಾ ಪ್ರತಿಭಾ ಆರ್ ತಿಳಿಸಿದರು.