Sunday, May 19, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಹಂದಿ ಸ್ಥಳದಲ್ಲಿ ಸಾವು-ಕಹಳೆ ನ್ಯೂಸ್

ಬಂಟ್ವಾಳ: ಅಪಘಾತಕ್ಕೆ ಒಳಗಾಗಿ ಕಾಡಹಂದಿಯೊAದು ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯಲ್ಲಿ ಮೇ.3 ರಂದು ಶುಕ್ರವಾರ ನಡೆದಿದ್ದು, ತಡವಾಗಿ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುಂಜಾಲಕಟ್ಟೆ ಸಮೀಪದ ಎನ್.ಸಿ.ರೊಡ್ ಎಂಬಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕಾಡುಹಂದಿ ಸ್ಥಳದಲ್ಲಿ ಸಾವನ್ನಪ್ಪಿದೆ.

ಜಾಹೀರಾತು
ಜಾಹೀರಾತು

ಸುಮಾರು 40 ಕೆ.ಜಿ.ತೂಕಹೊಂದಿರುವ ಗಂಡು ಕಾಡು ಹಂದಿ ಗುಡ್ಡದಿಂದ ಇಳಿದು ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಾಹೀರಾತು

ಹಂದಿ ಸಾವನ್ನಪ್ಪಿದ ಬಗ್ಗೆ ಇಲ್ಲಿನ ಸ್ಥಳೀಯರು ಬಂಟ್ವಾಳ ಅರಣ್ಯ ಇಲಾಖೆಗೆ ಹಾಗೂ ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಪುಲ್ ಶೆಟ್ಟಿ ಮೃತ ಕಾಡುಹಂದಿಯನ್ನು ಮರಣೋತ್ತರ ಪರೀಕ್ಷೆಗಾಗಿ ವಗ್ಗ ದಲ್ಲಿರುವ ಪಶುವೈದ್ಯಾಲಯಕ್ಕೆ ಸ್ಥಳಾಂತರ ಮಾಡಿದ್ದಾರೆ. ಇಲ್ಲಿನ ವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಸ್ಥಳಕ್ಕೆ ಡಿ.ಆರ್.ಎಫ್.ಅನಿಲ್ ಅರಣ್ಯ ಇಲಾಖಾ ಸಿಬ್ಬಂದಿ ಲಕ್ಮೀನಾರಾಯಣ ಬೇಟಿ ನೀಡಿದ್ದಾರೆ.