Wednesday, March 11, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಡ್ಕದಲ್ಲಿ‌ ರಸ್ತೆಗೆ ವೆಟ್ ಮಿಕ್ಸ್ ಹಾಕಿ‌ ಸಂಚಾರ ಸುಗಮಗೊಳಿಸಿ : ಅಧಿಕಾರಿಗಳ ಸಭೆಯಲ್ಲಿ‌ ಶಾಸಕ ಅಶೋಕ್ ರೈ ಆಗ್ರಹ- ಕಹಳೆ ನ್ಯೂಸ್

ಪುತ್ತೂರು: ಕಲ್ಲಡ್ಕದಲ್ಲಿ ಹೈವೇ ಕಾಮಗಾರಿ‌ಇನ್ನೂ ಮುಗಿದಿಲ್ಲ, ಮಳೆಗಾಲ ಆರಂಭವಾಗಿದೆ ಅಲ್ಲಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ವೆಟ್ ಮಿಕ್ಸ್ ಹಾಕಿ ಸಂಚಾರ ಸುಗಮವಾಗುವಂತೆ ಮಾಡಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಧಿಕಾರಿಗಳ ಸಭೆಯಲ್ಲಿ ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಜಿಲ್ಲಾ‌ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕರು‌ಭಾಗವಹಿಸಿ‌ ಮಾತನಾಡಿದರು. ಯಾವಾಗಲೋ ಕಾಮಗಾರಿ‌ ಮುಗಿಯಬೇಕಿತ್ತು ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಹಲವು ವರ್ಷಗಳಿಂದ ಪ್ರತೀ ಮಳೆಗಾಲ, ಬೇಸಿಗೆಯಲ್ಲೂ ವಾಹನ ಚಾಲಕರು ಪರದಾಡುವಂತ ಸನ್ನಿವೇಶ ಇದೆ. ಸದ್ಯಕ್ಕೆ ಈ ರಸ್ತೆಯಲ್ಲಿ ತೆರಳುವುದೇ ಸಾಧ್ಯವಿಲ್ಲ ಅನ್ನುವಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ.‌ಅಲ್ಲಲ್ಲಿ ಕೆಸರು‌ನೀರು‌ ತುಂಬಿಕೊಂಡಿದೆ ಎಂದು ಅಧಿಕಾರಿಗಳ‌ಗಮನ ಸೆಳೆದ ಶಾಸಕರು ತಕ್ಷಣವೇ ಅಲ್ಲಿ‌ವೆಟ್ ಮಿಕ್ಸರ್ ಹಾಕಿ ವಾಹನ ಸಂಚಾರಕ್ಕೆ ಅನುವು‌ಮಾಡಿಕೊಡಬೇಕು ಎಂದು ಹೇಳಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ಉಸ್ತುವಾರಿ‌ಸಚಿವರು‌ ಕೂಡಲೇ ವೆಟ್ ಮಿಕ್ಸರ್ ಹಾಕಿ ಸಂಚಾರ ಅಡಚಣೆಯನ್ನು ನಿವಾರಿಸಿ ಎಂದು ಸೂಚಿಸಿದರು.

ಜಾಹೀರಾತು
ಜಾಹೀರಾತು

ಬಪ್ಪಳಿಗೆಯಲ್ಲಿ ಅಪಾಯಕಾರಿ ಮರ ತೆರವು ಮಾಡಿ
ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಗೆಯಲ್ಲಿ ಅಪಾಯಕಾರಿ‌ ಮರಗಳು ರಸ್ತೆಗೆ ವಾಲಿಕೊಂಡಿದೆ. ಭಾನುವಾರ ಒಂದು ಮರ ಬಿದ್ದು ಎಂಟು‌ವಿದ್ಯುತ್ ಕಂಬಗಳು ಒಡೆದಿದೆ. ಇಲ್ಲಿನ ಅಪಾಯಕಾರಿ ಮರಗಳನ್ನು ತಕ್ಷಣವೇ ತೆರವು‌ಮಾಡಲು ಆದೇಶಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗೆ ಶಾಸಕರು‌ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ‌ಮುಲ್ಲೈಮುಗಿಲನ್ , ಜಿಪಂ ಸಿಇಒ ಆನಂದ್,‌ಮೆಸ್ಕಾಂ ಅಧಿಕಾರಿ ಪದ್ಮಾವತಿ , ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ , ಗೇರು‌ನಿಗಮದ ಅಧ್ಯಕ್ಷೆ ಮಮತಾಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.