Monday, March 9, 2026
ದಕ್ಷಿಣ ಕನ್ನಡಮಂಗಳೂರು

ಮಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಕರ್ಮಾರ್ ನಿವಾಸಿ ಲಕ್ಷ್ಮಣ ಮನೆಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್- ಕಹಳೆ ನ್ಯೂಸ್

ಮಂಗಳೂರು :ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಅಳಪೆ ದಕ್ಷಿಣದ ಶ್ರೀ ಮಹಾದೇವಿ ಭಜನಾ ಮಂದಿರ ಕರ್ಮಾರ್ ಬಳಿಯ ನಿವಾಸಿ ಲಕ್ಷ್ಮಣ ಎಂಬುವವರ ಮನೆಗೆ ಸಿಡಿಲು ಬಡಿದು ಹಲವು ಭಾಗಗಳಿಗೆ ತೀವ್ರ ಹಾನಿಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪರಿಶೀಲನೆ ನಡೆಸಿ ಸಿಡಿಲಿನಿಂದ ಹಾನಿಗೊಳಗಾದ ಮನೆಯ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಹಾಜರಿದ್ದ ಗ್ರಾಮ ಲೆಕ್ಕಾಧಿಕಾರಿ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಹಲವು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು