Thursday, March 12, 2026
ಸುದ್ದಿ

ರಾಜಕೀಯ ಲಾಭಕ್ಕಾಗಿ ಯಾವುದೇ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಬಾರದು: ಪಾಕ್‌ಗೆ ಭಾರತ ತಿರುಗೇಟು – ಕಹಳೆ ನ್ಯೂಸ್

ವಿಶ್ವಸಂಸ್ಥೆಯ ಮಹಾಧಿವೇಶನವೊಂದರಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪ ಮಾಡಿರುವುದಕ್ಕಾಗಿ ಭಾರತ ಪಾಕಿಸ್ತಾನವನ್ನು ಟೀಕಿಸಿದೆ. ‘ಸಂಕುಚಿತ ರಾಜಕೀಯ ಲಾಭ’ಕ್ಕಾಗಿ ಯಾವುದೇ ವೇದಿಕೆಯನ್ನು ದುರುಪಯೋಗಪಡಿಸುವುದು ಪಾಕಿಸ್ತಾನದ ಚಾಳಿಯಾಗಿದೆ ಎಂದು ಹೇಳಿದೆ.

ದೇಶವೊಂದರ ಪ್ರಾದೇಶಿಕ ಸಮಗ್ರತೆಯನ್ನು ದುರ್ಬಲಗೊಳಿಸಲು ಸ್ವನಿರ್ಧಾರದ ಹಕ್ಕನ್ನು ದುರುಪಯೋಗಪಡಿಸುವಂತಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಬಗ್ಗೆ ನಿಯೋಗವೊಂದು ನೀಡಿರುವ ಅನಗತ್ಯ ಹೇಳಿಕೆಯನ್ನು ನಾವು ತಿರಸ್ಕರಿಸುತ್ತೇವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಖಾಯಂ ನಿಯೋಗದ ಪ್ರಥಮ ಕಾರ್ಯದರ್ಶಿ ಪೌಲೋಮಿ ತ್ರಿಪಾಠಿ ಮಹಾಧಿವೇಶನದ ಮೂರನೇ ಸಮಿತಿ ಸಭೆಯಲ್ಲಿ ಮಾತನಾಡಿ ಹೇಳಿದರು.