Saturday, April 25, 2026
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಕೋಟಿ ಚೆನ್ನಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ..! – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ.

ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ಇದೇ ಸಂದರ್ಭ ಅಲ್ಲಿಗೆ ಆಗಮಿಸಿದ ಪೊಲೀಸರು ‘ಲಿಂಗ’ವನ್ನು ಸುರಕ್ಷಿತವಾಗಿ ಠಾಣೆಗೆ ಕೊಂಡೊಯ್ದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು