ನಾಳೆ(ಆ.28) ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಳೆ (ಆ.28) ರಂದು ಸಂಜೆ ಗಂಟೆ 4. 30ಕ್ಕೆ ಧರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿರುವುದು.














