Sunday, March 8, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ವಿದ್ಯಾಲಯಕ್ಕೆ ಹಿರಿಯ ವಿದ್ಯಾರ್ಥಿ ಕಡಮಜಲು ವಿಪುಲ್ ರೈ ಭೇಟಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಸ್ತುತ ಅಮೆರಿಕದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಉದ್ಯೋಗ ನಡೆಸುತ್ತಿರುವ ಕಡಮಜಲು ವಿಪುಲ್ ಎಸ್ ರೈ ಇವರು ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇವರು ಕಾಲೇಜಿನ ದೈನಂದಿನ ಪ್ರಾರ್ಥನೆಯಾದ ಸರಸ್ವತಿ ವಂದನೆಯಲ್ಲಿ ದೀಪ ಪ್ರಜ್ವಲಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದರು.
ನಂತರ ಮಾತನಾಡಿದ ಅವರು &quoಣ;ವಿವೇಕಾನಂದ ಪದವಿಪೂರ್ವ ಕಾಲೇಜು, ನನ್ನಂತಹ ಅದೆಷ್ಟೋ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ಇಲ್ಲಿ ಇಂದು ಸರಸ್ವತಿ ವಂದನೆಯಲ್ಲಿ ಭಾಗವಹಿಸುತ್ತಿರುವ ಸಂದರ್ಭದಲ್ಲಿ ನನಗೆ ನನ್ನ ಕಾಲೇಜಿನ ದಿನಗಳು ನನಗೆ ಮರುಕಳಿಸುತ್ತಿವೆ. ಮತ್ತೊಮ್ಮೆ ಈ ವಿದ್ಯಾಸಂಸ್ಥೆಗೆ ಆಗಮಿಸಿ ಇಲ್ಲಿನ ವಿದ್ಯಾರ್ಥಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸುವ ಅವಕಾಶ ನೀಡಿದ್ದಕ್ಕೆ ನಾನು ಸಂಸ್ಥೆಯ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ನನಗೆ ಮಾರ್ಗದರ್ಶನ ನೀಡಿದ ಎಲ್ಲಾ ಗುರು ವೃಂದದವರನ್ನು ಸ್ಮರಿಸುತ್ತಾ ಅವರಿಗೆ ವಂದಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ., ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಸಂಸ್ಥೆಯ ಡಾ. ಅನು ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ದೈನಂದಿನ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು