Recent Posts

Sunday, April 26, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಜನರ ನಿದ್ದೆಗೆಡಿಸಿದ್ದ ಕಾಡಾನೆ-ಕಹಳೆ ನ್ಯೂಸ್

ಪುತ್ತೂರು: ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಕಾಡಾನೆ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಕಾಡನೆಯ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.

ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಕೃಷಿ ಹಾನಿಯುಂಟು ಮಾಡುವ ಮೂಲಕ ಕೃಷಿಕರ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಒಂಟಿ ಸಲಗ ನಿನ್ನೆ ಸಂಜೆ ವೇಳೆ ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡು ಪರಿಸರದಲ್ಲಿ ಕಾಣಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಾಲ್ತಾಡು ಶಾಲಾ ಬಳಿಯಿಂದಾಗಿ ಆನೆ ಉಪ್ಪಳಿಗೆ ಭಾಗಕ್ಕೆ ತನ್ನ ಪ್ರಯಾಣ ಬೆಳೆಸಿದೆ ಎಂದು ಈ ಭಾಗದ ಗ್ರಾಮಸ್ಥರು ತಿಳಿಸಿದ್ದಾರೆ. ಆನೆ ಇರುವ ಪ್ರದೇಶಕ್ಕೆ ಅರಣ್ಯ ಇಲಾಖೆಯ
ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.