Recent Posts

Saturday, April 25, 2026
ದಕ್ಷಿಣ ಕನ್ನಡಪುತ್ತೂರುಮಡಿಕೇರಿಸುದ್ದಿಸುಳ್ಯ

ಬಸ್ ನಲ್ಲಿ ಬಾಲಕಿಯೊಂದಿಗೆ ಅನುಚಿತ ವರ್ತನೆ : ಆರೋಪಿ ಕಾಮುಕ ಅಬ್ದುಲ್ ಕುಂಞ ನನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್*

ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ ಹಾಗೂ ಬಸ್‌ ನಲ್ಲಿದ್ದವರು ಆರೋಪಿಯನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರಪೇಟೆಯ ಕುಟುಂಬವೊಂದು ಪುತ್ತೂರು ಬಸ್ ನಲ್ಲಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಪುತ್ತೂರಿನಲ್ಲಿ ಬಸ್ ಏರಿದ ಪಾಣಾಜೆಯ ಅಬ್ದುಲ್ ಕುಂಞ ಎಂಬವರು ಬಸ್ ನಲ್ಲಿದ್ದ ಸೋಮವಾರಪೇಟೆಯ ಬಾಲಕಿಯ ಮೈ ಮುಟ್ಟಿದನೆನ್ನಲಾಗಿದೆ.

 

ಇದನ್ನುಬಾಲಕಿ ಆಕ್ಷೇಪಿಸಿ ಬಸ್ ನಲ್ಲಿದ್ದ ತನ್ನ ಮನೆಯವರಿಗೆ ತಿಳಿಸಿದರು. ಆ ವ್ಯಕ್ತಿ ಬಾಲಕಿಯೊಂದಿಗೆ ಅನುಚಿತ ವಾಗಿ ವರ್ತಿಸಿದ್ದನ್ನು ಬಸ್ ನಲ್ಲಿದ್ದವರು ನೋಡಿದ್ದರೆಂದು ಬಳಿಕ ಆತನನ್ನು ಹಿಡಿದುಕೊಂಡು ಪೋಲೀಸರಿಗೆ ಮಾಹಿತಿ ನೀಡಿದರು. ಇದೀಗ ಅಬ್ದುಲ್ ಕುಂಣಿಯನ್ನು ವಶಕ್ಕೆ ಪಡೆದಿರುವ ಸುಳ್ಯ ಪೋಲೀಸರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ