
ಮಹೀಂದ್ರಾ ಸ್ಕಾರ್ಪಿಯೋ ಕಾರ್, ವಿಆರ್ ಎಲ್ ಖಾಸಗಿ ಬಸ್, ಕಂಟೇನರ್ ವಾಹನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, 6 ಜನರು ದಾರುಣ ಸಾವಿಗೀಡಾದ ಘಟನೆ ಜಿಲ್ಲೆಯ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬೆಳಗ್ಗೆ ನಡೆದಿದೆ.
ಸೊಲ್ಲಾಪುರ ಕಡೆಯಿಂದ ಹೋಗುತ್ತಿದ್ದ ಸ್ಕಾರ್ಪಿಯೋ ಕಾರ್, ಮುಂಬೈನಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ವಿಆರ್ ಎಲ್ ಬಸ್, ಕಂಟೇನರ್ ಮಧ್ಯೆ ಭೀಕರ ಡಿಕ್ಕಿಯಾಗಿ, ಸ್ಕಾರ್ಪಿಯೋದಲ್ಲಿರುವ 5 ಜನರು, ವಿಆರ್ ಎಲ್ ಬಸ್ ಚಾಲಕ ಸ್ಥಳದಲ್ಲೇ ಅಸುನೀಗಿದ್ದಾರೆ.














