Saturday, March 7, 2026
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪದ್ಮಭೂಷಣ ಪ್ರಶಸ್ತಿ’ ಸ್ವೀಕರಿಸಿದ ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ – ಕಹಳೆ ನ್ಯೂಸ್

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೀಗ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿರುವುದು ಕನ್ನಡಿಗರಿಗೆ ಅಪಾರ ಸಂತಸವನ್ನು ತಂದಿದೆ.

ಭಾರತೀಯ ಚಿತ್ರರಂಗ ಕಂಡ ಅಪರೂಪದ ನಟ, ಕನ್ನಡದ ಹೆಮ್ಮೆ ಅನಂತ್ ನಾಗ್ ಅವರಿಗೆ ಮಂಗಳವಾರ (ಮೇ 27) ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿದರು. ಈ ಗಳಿಗೆಯು ಕೋಟ್ಯಂತರ ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅನಂತ್ ನಾಗ್ ಏನ್ ಹೇಳಿದ್ದರು?

ಕಳೆದ ಜನವರಿಯ 25ರಂದು ಅನಂತ್ ನಾಗ್ ಅವರಿಗೆ ಪದ್ಮಭೂಷಣ ಘೋಷಣೆ ಆಗಿರುವ ವಿಚಾರ ಗೊತ್ತಾಗಿತ್ತು. ಇದೀಗ ಮೇ 27ರಂದು ಅದನ್ನು ಅವರು ಸ್ವೀಕರಿಸಿದ್ದಾರೆ. “ಭಾರತ ಸರ್ಕಾರ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ, ಉತ್ತೇಜನ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಲಾ ಕ್ಷೇತ್ರ ಸಂಗೀತ, ರಂಗಭೂಮಿ, ಸಾಹಿತ್ಯ, ಸಾಮಾಜಿಕ ಕಾರ್ಯ ಹೀಗೆ ಎಲ್ಲ ರಂಗದಲ್ಲೂ ತೊಡಗಿರುವಂತಹ ಅಸಾಮಾನ್ಯರನ್ನು ಗುರುತಿಸಿ ಪದ್ಮಭೂಷಣದಂತಹ ಅತ್ಯುನ್ನತ ಗೌರವ ಪುರಸ್ಕಾರವನ್ನು ನೀಡುತ್ತಿದ್ದಾರೆ” ಎಂದು ನಟ ಅನಂತ ನಾಗ್ ಹೇಳಿಕೊಂಡಿದ್ದರು.