Thursday, September 10, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಫರಂಗಿಪೇಟೆ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಯುವಕ ಮೃತ್ಯು -ಕಹಳೆ ನ್ಯೂಸ್

ಫರಂಗಿಪೇಟೆ : ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಶುಕ್ರವಾರ ನಡೆದಿದೆ.

ಜಾಹೀರಾತು

ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್ ನಲ್ಲಿರುವ ಝಾಹಿದ್ (28) ಮೃತ ಯುವಕ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವವಷ್ಟರಲ್ಲಿ ಮಂಗಳೂರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತ ಯುವಕನ ತಂದೆ ಈ ಹಿಂದೆಯೇ ತೀರಿಹೋಗಿದ್ದು, ತಾಯಿ ಹಾಗೂ ಮೂರು ಸಹೋದರರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.