ಯಕ್ಷಧ್ರುವ ಪಟ್ಲ ಫೌಂಡೇಶನ್: ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು ಅವರು ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಸಂಚಾಲಕರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ದೇವದಾಸ ಶೆಟ್ಟಿ, ಕಾರ್ಯದರ್ಶಿಯಾಗಿ ಮೋಹನ ದಾಸ್ ಕೊಟ್ಟಾರಿ, ಉಪಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿಯಾಗಿ ಶಂಕರ ಶೆಟ್ಟಿ ಪರಾರಿ ಆಯ್ಕೆಯಾಗಿದ್ದಾರೆ.
ಗೌರವ ಸಲಹೆಗಾರರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಚಂದ್ರಹಾಸ್ ಡಿ.ಶೆಟ್ಟಿ ರಂಗೋಲಿ, ಸತೀಶ್ ಶೆಟ್ಟಿ ಪಟ್ಲ, ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಸದಾನಂದ ಡಿ.ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.













