Recent Posts

Saturday, September 12, 2026
ಸುದ್ದಿ

ಹಾಸನದಲ್ಲಿ ಮಳೆ ಆರ್ಭಟ : ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕಹಳೆ ನ್ಯೂಸ್

ಹಾಸನ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ  ಒಳಹರಿವು ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಹಾಸನ, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ.
ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಸಕಲೇಶಪುರ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೇಮಾವತಿ ಜಲಾಶಯಕ್ಕೆ ಒಟ್ಟು 8,276 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ, ನಾಲೆಗಳು ಸೇರಿ ಒಟ್ಟು 350 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು