
ಕುಸೂಬೂರು ದೇವಾಲಯದ ಮುಂಭಾಗ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಮೇಲೆ ಮರಬಿದ್ದು, ಹೆದ್ದಾರಿಗೆ ವಿದ್ಯುತ್ ಕಂಬ ಮತ್ತು ಲೈನ್ ವಾಲಿದೆ. ಖಾಸಗಿ ಬಸ್ ಮೇಲೆ ನಿಂತು ಸೆಸ್ಕ್ ಸಿಬ್ಬಂದಿಗಳು ವಿದ್ಯುತ್ ಕಂಬ ಮತ್ತು ಮಾರ್ಗವನ್ನು ಸರಿಪಡಿಸಿದರು.
ಬಜೆಗುಂಡಿ ಬಳಿ ವಿದ್ಯುತ್ ಮಾರ್ಗದ ಮೇಲೆ ಮರ ಬಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಶುಂಠಿ ಗ್ರಾಮದ ಎಚ್.ಎಂ.ಜಿತೇಂದ್ರ ಎಂಬವರ ಲೈನ್ ಮನೆಯ ಶೀಟ್ ಗಾಳಿಗೆ ಹಾರಿಹೋಗಿದೆ.
ಕಳೆದ 24 ಗಂಟೆಗಳಲ್ಲಿ ಶಾಂತಳ್ಳಿ ಹೋಬಳಿಗೆ 14 ಸೆಂ.ಮಿ ಮಳೆಯಾಗಿದೆ. ಸೋಮವಾರಪೇಟೆ ಕಸಬಾ 7.4, ಶನಿವಾರಸಂತೆಗೆ 4.8, ಕೊಡ್ಲಿಪೇಟೆಗೆ 3.54 ಮಳೆಯಾಗಿದೆ. ಸೋಮವಾರಪೇಟೆ ಸಮೀಪದ ಬಜೆಗುಂಡಿ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿರುವುದು














