Saturday, March 14, 2026
ಬೆಂಗಳೂರುಸುದ್ದಿ

ಆರ್‌ಸಿಬಿ ಕಾಲ್ತುಳಿತ ಪ್ರಕರಣ : 3 ಐಪಿಎಸ್‌‍ ಅಧಿಕಾರಿಗಳ ಅಮಾನತನ್ನು ಅಂಗೀಕರಿಸಿದ ಕೇಂದ್ರ –ಕಹಳೆ ನ್ಯೂಸ್

ಬೆಂಗಳೂರು,ಜೂ.28- ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ಸೃಷ್ಟಿಸಿದ್ದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ ದಯಾನಂದ್‌ ಸೇರಿದಂತೆ ಮೂವರು ಐಪಿಎಸ್‌‍ ಅಧಿಕಾರಿಗಳ ಮೇಲೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಕ್ರಮವನ್ನು ಕೇಂದ್ರ ಗೃಹ ಇಲಾಖೆ ಅಂಗೀಕರಿಸಿದೆ.

ಇದು ಆಡಳಿತಾತಕ ಕ್ರಮಗಳಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಘಟನೆಯಿಂದ ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಮೇಲೆಯೂ ಗಮನ ಸೆಳೆಯಲಾಗಿದೆ, ವಿಶೇಷವಾಗಿ ಆಲ್‌ ಇಂಡಿಯಾ ಸರ್ವೀಸಸ್‌‍ ಅಧಿಕಾರಿಗಳ ಶಿಸ್ತು ಕ್ರಮಗಳ ಸಂದರ್ಭದಲ್ಲಿ ಇದು ಮುಖ್ಯವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್‌‍ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ ದಯಾನಂದ್‌, ಹೆಚ್ಚುವರಿ ಪೊಲೀಸ್‌‍ ಆಯುಕ್ತ ವಿಕಾಸ್‌‍ ಕುಮಾರ್‌ ಮತ್ತು ಬೆಂಗಳೂರಿನ ಸೆಂಟ್ರಲ್‌ ವಿಭಾಗದ ಡಿಸಿಪಿ ಶೇಖರ್‌ ಎಚ್‌ ಟೆಕ್ಕನವರ್‌ ಎಂಬ ಐಪಿಎಸ್‌‍ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.ಇದೀಗ ಕೇಂದ್ರ ಸರ್ಕಾರ ಈ ಅಮಾನತು ಆದೇಶವನ್ನು ಅಂಗೀಕರಿಸಿದ್ದು, ಡಿಪಿಎಆರ್‌ ( ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ) ಗೆ ಮಾಹಿತಿಯನ್ನು ರವಾನಿಸಿದೆ.

ಜಾಹೀರಾತು
ಜಾಹೀರಾತು

ಐಎಎಸ್‌‍ ಹಾಗೂ ಐಪಿಎಸ್‌‍ ಅಧಿಕಾರಿಗಳ ಅಮಾನತು ಬಗ್ಗೆ ನಿಯಮಾನುಸಾರ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕು. ಅಧಿಕಾರಿಗಳ ಕೇಡರ್‌ ಹಾಗೂ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರ ಅಧಿಕಾರ ಹೊಂದಿದೆ. ಆದರೆ, ಅಮಾನತು ವಿಚಾರದಲ್ಲಿ ಕೇಂದ್ರ ಸರ್ಕಾರದೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ನಿಯಮವಿದೆ.

ಐಪಿಎಸ್‌‍ ಅಥವಾ ಐಎಎಸ್‌‍ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದರ ಬಗ್ಗೆ ಒಂದು ದಿನದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಬೇಕು. ನಂತರ 15 ದಿನಗಳಲ್ಲಿ ಆ ಅಧಿಕಾರಿಗಳ ಅಮಾನತಿಗೆ ಕಾರಣಗಳ ಕುರಿತು ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಡಬೇಕು. ಈ ವರದಿ ಆಧರಿಸಿ 1 ತಿಂಗಳಲ್ಲಿ ಅಮಾನತು ಆದೇಶವನ್ನು ಒಪ್ಪಿಗೆ ಅಥವಾ ತಿರಸ್ಕಾರದ ಬಗ್ಗೆ ಕೇಂದ್ರ ನಿರ್ಣಯ ಮಾಡುತ್ತದೆ.

ಘಟನೆಯ ಹಿನ್ನಲೆ :
ಕಳೆದ ಜೂನ್‌ 4, 2025 ರಂದು ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಐಪಿಎಲ್‌ 2025 ರ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿ, 56 ಜನರು ಗಾಯಗೊಂಡಿದ್ದರು. ಇದರಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ರಾಜ್ಯ ಸರ್ಕಾರ ಮೂವರು ಐಪಿಎಸ್‌‍ ಅಧಿಕಾರಿಗಳನ್ನು ಅಮಾನತ್ತು ಮಾಡಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಹೊರಗೆ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆಗೆ ಲಕ್ಷಾಂತರ ಜನರು ಜಮಾಯಿಸಿದ್ದರು. ಆದರೆ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಸಮಯದ ಸಿದ್ಧತೆ ಇಲ್ಲದಿರುವ ಬಗ್ಗೆ ಪೊಲೀಸ್‌‍ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿತ್ತು. ಅದಾಗ್ಯೂ, ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಮತ್ತು ಡಿಎನ್‌ಎ ಎಂಟರ್ಟೈನೆಂಟ್‌ ಸಂಸ್ಥೆಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜನಸಂದಣಿ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡದಿರುವುದು ಮತ್ತು ಸಾರ್ವಜನಿಕರಿಗೆ ಸುರಕ್ಷತಾ ಮಾಹಿತಿಯನ್ನು ಒದಗಿಸದಿರುವುದು ಈ ದುರಂತಕ್ಕೆ ಕಾರಣವಾಯಿತು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಿತ್ತು. ಈ ಕಾರಣಕ್ಕಾಗಿ, ಅಂದಿನ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ ದಯಾನಂದ್‌, ಹೆಚ್ಚುವರಿ ಪೊಲೀಸ್‌‍ ಆಯುಕ್ತ (ಪಶ್ಚಿಮ) ವಿಕಾಸ್‌‍ ಕುಮಾರ್‌ ವಿಕಾಸ್‌‍, ಕೇಂದ್ರ ವಿಭಾಗದ ಡಿಸಿಪಿ ಶೇಖರ್‌ ಎಚ್‌. ಟೆಕ್ಕನವರ್‌, ಕಬ್ಬನ್‌ ಪಾರ್ಕ್‌ನ ಎಸಿಪಿ ಸಿ. ಬಾಲಕೃಷ್ಣ ಮತ್ತು ಕಬ್ಬನ್‌ ಪಾರ್ಕ್‌ ಪೊಲೀಸ್‌‍ ಠಾಣೆಯ ಇನ್‌ಸ್ಪೆಕ್ಟರ್‌ ಎ.ಕೆ. ಗಿರೀಶ್‌ ಅವರನ್ನು ಅಮಾನತುಗೊಳಿಸಲಾಗಿದೆ.

ಸಿಎಟಿಯಲ್ಲಿ ಪ್ರಶ್ನೆ! :
ಅಮಾನತುಗೊಂಡ ಐಪಿಎಸ್‌‍ ಅಧಿಕಾರಿಗಳ ಪೈಕಿ ವಿಕಾಸ್‌‍ ಕುಮಾರ್‌ ವಿಕಾಸ್‌‍ ಅವರು ಕೇಂದ್ರ ಆಡಳಿತಾತಕ ನ್ಯಾಯಮಂಡಳಿಯಲ್ಲಿ (ಸಿಎಟಿ) ತಮ ಅಮಾನತು ಆದೇಶವನ್ನು ಪ್ರಶ್ನಿಸಿದ್ದಾರೆ.
ಈ ಅಮಾನತು ಆದೇಶವು ಯಾವುದೇ ಪೂರ್ವ ತನಿಖೆಯಿಲ್ಲದೆ ಜಾರಿಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದರ ಜೊತೆಗೆ, ಇಂಡಿಯನ್‌ ಪೊಲೀಸ್‌‍ ಫೌಂಡೇಶನ್‌ ಮತ್ತು ಹಲವಾರು ನಿವೃತ್ತ ಐಪಿಎಸ್‌‍ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಈ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಆರ್‌ಸಿಬಿ, ಕೆಎಸ್‌‍ಸಿಎ ಮತ್ತು ಇವೆಂಟ್‌ ಆಯೋಜಕರಾದ ಡಿಎನ್‌ಎ ಎಂಟರ್ಟೈನೆಂಟ್‌ನಿಂದ ಸೂಕ್ತ ಎಚ್ಚರಿಕೆಯನ್ನು ನೀಡಿದ್ದರೂ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಈ ಸಂಸ್ಥೆಗಳೇ ಹೆಚ್ಚಿನ ಜವಾಬ್ದಾರಿಯನ್ನು ಹೊರಬೇಕು ಎಂದು ಅವರು ವಾದಿಸಿದ್ದಾರೆ.

ರಾಜ್ಯ ಸರ್ಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಮೈಕಲ್‌ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸಿದೆ. ಈ ಆಯೋಗವು ಘಟನೆಯ ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿಯನ್ನು ಸಲ್ಲಿಸಲಿದೆ. ಇದರ ಜೊತೆಗೆ, ಆರ್‌ಸಿಬಿ, ಕೆಎಸ್‌‍ಸಿಎ ಮತ್ತು ಡಿಎನ್‌ಎ ಎಂಟರ್ಟೈನೆಂಟ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ.