Friday, March 6, 2026
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ – ಕಹಳೆ ನ್ಯೂಸ್

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕಾಗಿ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊ*ಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯುವತಿಯ ವಿಚಾರಕ್ಕೆ ಗುಂಪೊಂದು ಕುಶಾಲ್‌ ಎನ್ನುವ ಯುವಕನನ್ನು ಕಿಡ್ನಾಪ್‌ ಮಾಡಿ ಹಿಗ್ಗಾಮುಗ್ಗಾವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದು ವರದಿಯಾಗಿದೆ.

ಜಾಹೀರಾತು
ಜಾಹೀರಾತು

ಏನಿದು ವಿಚಾರ?:

ಕಾಲೇಜಿನಲ್ಲಿ ಕುಶಾಲ್‌ಗೆ ಯುವತಿಯೊಬ್ಬಳ ಜತೆ ಪ್ರೀತಿ ಆಗಿತ್ತು. ಎರಡು ವರ್ಷಗಳ ಪ್ರೀತಿ ಕೆಲ ತಿಂಗಳ ಹಿಂದಷ್ಟೇ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಯುವಕನ ಪರಿಚಯವಾಗಿತ್ತು ಎನ್ನಲಾಗಿದೆ. ಈ ವಿಚಾರ ಕುಶಾಲ್‌ನ ಗಮನಕ್ಕೆ ಬಂದಿದ್ದು, ಆತ ಇದನ್ನು ಸಹಿಸಲಾಗದೆ ತನ್ನ ಮಾಜಿ ಪ್ರಿಯತಮೆಗೆ ಅಶ್ಲೀ*ಲ ಸಂದೇಶಗಳನ್ನು ಕಳುಹಿಸಲು ಶುರು ಮಾಡಿದ್ದಾನೆ ಎನ್ನಲಾಗಿದೆ.

ಯುವತಿಗೆ ಅಶ್ಲೀ*ಲ ಸಂದೇಶ ಕಳುಹಿಸುತ್ತಿರುವ ವಿಚಾರ ಆಕೆಯ ಸ್ನೇಹಿತರಿಗೆ ಗೊತ್ತಾಗಿದೆ. ಇದನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವ ಎನ್ನುವ ಯೋಜನೆಯನ್ನು ಹಾಕಿಕೊಂಡು ಯುವತಿಯ ಸ್ನೇಹಿತರು ಕುಶಾಲ್‌ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

ಬಟ್ಟೆ ಬಿಚ್ಚಿಸಿ ಹಲ್ಲೆ: ರೇಣುಕಾಸ್ವಾಮಿಯಂತೆ ಮಾಡುತ್ತೇವೆ ಎಂದ ಆರೋಪಿಗಳು..

ಕುಶಾಲ್‌ನನ್ನು ಕಿಡ್ನಾಪ್‌ ಮಾಡಿಕೊಂಡು ಬಂದ ಗುಂಪು, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್‌ನನ್ನು ಕೋಲಿನಿಂದ ಹೊಡೆದು, ಆತನ ಬಟ್ಟೆ ಬಿಚ್ಚಿಸಿ ಮರ್ಮಾಂಗಕ್ಕೆ ತುಳಿದು ವಿಕೃತಿ ಮೆರೆದಿದ್ದಾರೆ. ಈ ಕೃತ್ಯವನ್ನು ಗುಂಪಿನಲ್ಲಿದ್ದ ಒಬ್ಬಾತ ವಿಡಿಯೋ ಮಾಡಿದ್ದು, ಇದು ರೇಣುಕಾಸ್ವಾಮಿ ಕೇಸ್‌ನಂತೆ ಆಗುತ್ತೆ ಎಂದಿದ್ದಾನೆ. ಎ1 ಹೇಮಂತ ಎ2 ನಾನು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಬಳಿಕ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್​ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ನಾಲ್ವರ ಬಂಧನ:

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಎನ್ನುವವರನ್ನು ಬಂಧಿಸಲಾಗಿದೆ.

ಸದ್ಯ ಕುಶಾಲ್‌ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.