Thursday, March 12, 2026
ಧಾರವಾಡಸುದ್ದಿ

ನಿಲ್ಲದ ಹೃದಯಾಘಾತ : ಜೀವ ಕಳೆದುಕೊಂಡ ಐಎಎಸ್ ಆಕಾಂಕ್ಷಿ ಜೀವಿತಾ! -ಕಹಳೆ ನ್ಯೂಸ್

ಧಾರವಾಡ: ರಾಜ್ಯಾದ್ಯಂತ ಸರಣಿ ಹೃದಯಾಘಾತ ಪ್ರಕರಣಗಳು ಜನತೆಯನ್ನು ಭೀತಿಗೆ ತಳ್ಳುತ್ತಿದೆ. ಮಂಗಳವಾರ ಯುಪಿಎಸ್‌ಸಿಗೆ ತಯಾರಿ ನಡೆಸುತ್ತಿದ್ದ 26 ವರ್ಷದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ನಗರದ ಪುರೋಹಿತ್‌ ನಗರದಲ್ಲಿ 26 ವರ್ಷದ ಜೀವಿತಾ ಕುಸಗೂರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜೀವಿತಾ ತಲೆ ಸುತ್ತು ಬರುತ್ತಿರುವುದಾಗಿ ಹೇಳಿ ಸುಸ್ತಾಗಿ ಕುಳಿತಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಜಾಹೀರಾತು
ಜಾಹೀರಾತು

ಆದರೆ ಜೀವಿತಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಆಕೆ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

ಜೀವಿತಾ ಐಎಎಸ್‌ ಅಧಿಕಾರಿಯಾಗುವ ಕನಸು ಹೊಂದಿದ್ದು, ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಆದರೆ ಆಕೆಯ ದಿಢೀರ್‌ ಸಾವು ಕುಟುಂಬಸ್ಥರನ್ನು ಆಘಾತಕ್ಕೆ ತಳ್ಳಿದೆ.