ರಾಜ್ಯದ ಜನರ ಹಿತಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ `ಚಂಡಿ ಹೋಮ’ದಲ್ಲಿ ಪಾಲ್ಗೊಂಡ ಗೃಹ ಸಚಿವ ಜಿ.ಪರಮೇಶ್ವರ್.! -ಕಹಳೆ ನ್ಯೂಸ್

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ರಾಜ್ಯದ ಜನರ ಹಿತಕ್ಕಾಗಿ ಪ್ರಾರ್ಥಿಸಿ ಪೂಜೆಯಲ್ಲಿ ಪಾಲ್ಗೊಂಡಿರುವುದಾಗಿ ಹೇಳಿದರು. ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 10-15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ. ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.









