Saturday, March 7, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2025 – 26 ನೇ ಸಾಲಿನ ಶಿಕ್ಷಕ ರಕ್ಷಕ ಸಂಘವನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ರಾಜೇಶ್ ಕುರ್ಕಿಲ್ , ಉಪಾಧ್ಯಕ್ಷರಾಗಿ ಉಷಾ ಖಜಾಂಚಿಯಾಗಿ ಯಶೋಧರ ಸದಸ್ಯರಾಗಿ ವಸಂತಿ, ವಿಜಯಲಕ್ಷ್ಮಿ, ಅರುಣಾಕ್ಷಿ, ಸುಂದರ ಮತ್ತು ಲಕ್ಷ್ಮಣ ಆಯ್ಕೆಯಾದರು, ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮತ್ತು ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಕೋಕಿಲ ಕಾರ್ಯನಿರ್ವಹಿಸುವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಶಾಲೆಯಲ್ಲಿರುವ ಸೌಲಭ್ಯಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡುವುದರೊಂದಿಗೆ ಸಂಸ್ಕಾರಯುತ, ಶಿಸ್ತುಭರಿತ ಶಿಕ್ಷಣವನ್ನ ಪಡೆದಾಗ ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗುವುದು ಅದರಲ್ಲಿ ಅವರ ಪಾತ್ರ ಅತಿ ಮುಖ್ಯವಾದದ್ದು ಎಂದು ತಿಳಿ ಹೇಳಿದರು.

ಜಾಹೀರಾತು
ಜಾಹೀರಾತು

ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭವಾನಿ ಮಾರ್ಪಾಲು ಇವರನ್ನು ಗೌರವಿಸಲಾಯಿತು.ವೇದಿಕೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ರವಿಚಂದ್ರ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದರು.

ಶಿಕ್ಷಕರಾದ ಗಣೇಶ್ವರ್ ಸ್ವಾಗತಿಸಿ, ಕೃಷ್ಣಾನಂದ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.