Wednesday, March 11, 2026
ಕುಂದಾಪುರಸುದ್ದಿ

ಗಂಗೊಳ್ಳಿ : ದನ ಕಳವು ಯತ್ನ : ಇಬ್ಬರು ಪೊಲೀಸ್ ವಶಕ್ಕೆ….!!- ಕಹಳೆ ನ್ಯೂಸ್

ಗಂಗೊಳ್ಳಿ : ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮೆಡಿಕಲ್ ಶಾಪ್ ಪಕ್ಕದಲ್ಲಿ ಮಲಗಿದ್ದ ದನ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತ ಆರೋಪಿಗಳನ್ನು ಬ್ರಹ್ಮಾವರದ ಬೈಕಾಡಿಯ ನೌಫಲ (23) , ಕುಂದಾಪುರದ ಗುಲ್ವಾಡಿಯ ನಿಶಾದ್‌ (23) ಎಂದು ಗುರುತಿಸಲಾಗಿದೆ.
ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು ಹಾಗೂ 2 ಮೊಬೈಲ್‌ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜು.06 ರಂದು ಬೆಳಿಗ್ಗಿನ ಜಾವ 04:00 ಗಂಟೆಯ ಸುಮಾರಿಗೆ ನಾಡಾ ಗ್ರಾಮ ಪಂಚಾಯತ್‌ ಸಮೀಪ ಕಾರಿನಲ್ಲಿ ಬಂದ ಮೂವರು ಆರೋಪಿಗಳು ಮೆಡಿಕಲ್‌ ಪಕ್ಕದಲ್ಲಿ ಮಲಗಿದ್ದ ದನಗಳನ್ನು ಕಾರಿಗೆ ತುಂಬಲು ಪ್ರಯತ್ನಿಸುತ್ತಿದ್ದರು. ಈ ವೇಳೆ ದಾರಿಯಲ್ಲಿನ ಬಂದ ವಾಹನವನ್ನು ನೋಡಿ ಓಡಿ ಹೋಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು