
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧಂಗು ಬಳಿಯ ಚಕ್ಕಿ ನದಿಯ ಮೇಲಿನ ರೈಲ್ವೆ ಸೇತುವೆಯ ತಡೆಗೋಡೆ ಸೋಮವಾರ ನಿರಂತರ ಮಳೆಯಿಂದಾಗಿ ಕುಸಿದು ಬಿದ್ದಾಗ ರೈಲಿನ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಧಂಗು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗಡಿಯಲ್ಲಿದೆ ಮತ್ತು ಸೇತುವೆ ಪಠಾಣ್ಕೋಟ್ ಮೂಲಕ ದೆಹಲಿ-ಜಮ್ಮು ರೈಲು ಮಾರ್ಗದಲ್ಲಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಭಯಾನಕ ದೃಶ್ಯಗಳು ರೈಲು ಪವಾಡಸದೃಶವಾಗಿ ಪಾರಾಗಿರುವುದನ್ನು ಸೆರೆಹಿಡಿದಿದ್ದು, ವೀಕ್ಷಕರಲ್ಲಿ ಕಳವಳ ಮೂಡಿಸಿದೆ.
ನೂರ್ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಶೋಕ್ ರತನ್, “ಈ ಪ್ರದೇಶದಲ್ಲಿ ಅತಿಯಾದ ಮಳೆಯಿಂದಾಗಿ ತಡೆಗೋಡೆ ಕುಸಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ನಾವು ಇದೀಗ ಪಕ್ಕದ ಧಂಗು ರಸ್ತೆಯನ್ನು ಮುಚ್ಚಿದ್ದೇವೆ ಮತ್ತು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ” ಎಂದು ಹೇಳಿದರು.














