Wednesday, March 18, 2026
ಸುದ್ದಿ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಸಿಕ್ಕಿಬಿದ್ದ ಇಬ್ಬರು ಉಗ್ರರು -ಕಹಳೆ ನ್ಯೂಸ್

ಶ್ರೀನಗರ: ಜಮ್ಮು-ಕಾಶ್ಮೀರದ (J &K) ಪೂಂಚ್ ಜಿಲ್ಲೆಯ ಕಸಲಿಯಾನ್ ಪ್ರದೇಶದಲ್ಲಿ ಇಂದು ಬುಧವಾರ ನಸುಕಿನ ಜಾವ ಒಳನುಸುಳುವಿಕೆ ಪ್ರಯತ್ನ ವಿಫಲವಾಗಿ ಭದ್ರತಾ ಪಡೆಗಳು ಮತ್ತು ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು.

ಪೂಂಚ್‌ನ ಕಸಲಿಯಾನ್ ಬಳಿಯ ನಿಯಂತ್ರಣ ರೇಖೆ (LoC) ಮೂಲಕ ಇಬ್ಬರಿಂದ ಮೂವರು ಉಗ್ರರ ಗುಂಪು ಒಳನುಸುಳಲು ಪ್ರಯತ್ನಿಸಿದೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ತಡರಾತ್ರಿ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಕಾರ್ಯಾಚರಣೆಯ ಸಮಯದಲ್ಲಿ, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು.

ಜಾಹೀರಾತು
ಜಾಹೀರಾತು

ಮೂಲಗಳ ಪ್ರಕಾರ, ಪ್ರಸ್ತುತ ಇಬ್ಬರು ಉಗ್ರರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ. ಸುತ್ತುವರಿದ ಪ್ರದೇಶವನ್ನು ಬಲಪಡಿಸಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಗುಂಡಿನ ಚಕಮಕಿ ಮುಂದುವರಿದಿದೆ.

ಉಗ್ರರ ನಿಖರವಾದ ಸ್ಥಳವನ್ನು ಗುರುತಿಸಲು ಭದ್ರತಾ ಪಡೆಗಳು ಡ್ರೋನ್‌ಗಳನ್ನು ಬಳಸಿಕೊಂಡು ವೈಮಾನಿಕ ಕಣ್ಗಾವಲು ನಡೆಸುತ್ತಿವೆ.

ಏಪ್ರಿಲ್ 22 ರಂದು ಶ್ರೀನಗರದಲ್ಲಿ ನಡೆದ ಗುಂಡಿನ ಚಕಮಕಿಯ ಸಂದರ್ಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಮೂವರು ಪಾಕಿಸ್ತಾನಿ ಉಗ್ರರ ಹತ್ಯೆಯ ನಂತರ, ಜಮ್ಮು- ಕಾಶ್ಮೀರದ ಎಲ್‌ಒಸಿ ಮತ್ತು ಅಂತಾರಾಷ್ಟ್ರೀಯ ಗಡಿ (IB) ಉದ್ದಕ್ಕೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಉಗ್ರರ ಒಳನುಸುಳುವಿಕೆ ಪ್ರಯತ್ನಗಳನ್ನು ತಡೆಗಟ್ಟಲು ಸೈನಿಕರನ್ನು ಹೆಚ್ಚಿನ ಕಟ್ಟೆಚ್ಚರದಲ್ಲಿ ಇರಿಸಲಾಗಿದೆ.