
ಹುಬ್ಬಳ್ಳಿ:- ಜೈನ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಗಿರೀಶ ಮಟ್ಟಣ್ಣವರ್ ಹಾಗೂ ಅದರ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FIR no: 01/2025 00: 299, 196(1)(໖) ໖.
ಎನ್.ಎಸ್ 2023 ಅಡಿ ಪ್ರಕರಣ ದಾಖಲಾಗಿದೆ. ಜೈನ್ ಸಮಾಜದ ಮುಖಂಡ ಅಜೀರ್ ಬಸಾಪುರ ಅವರಿಂದ ದೂರು ದಾಖಲಿಸಲಾಗಿದೆ. ಗಿರೀಶ್ ಮಟ್ಟೆಣ್ಣವರ ಜೈನ್ ಧರ್ಮದ ಬಗ್ಗೆ ಅವಹೇಳನಕಾರಿ ಅಭಿಪ್ರಾಯ
ಹಂಚಿಕೊಂಡ ಹಿನ್ನೆಲೆ ಈ FIR ದಾಖಲಾಗಿದೆ.
ಗಿರೀಶ್ ಮಟ್ಟೆಣ್ಣವರ ಜೈನ್ ಧರ್ಮೀಯರು ಕ್ರೂರಿಗಳು, ಸ್ತ್ರೀಲೋಲರು, ಮತಾಂಧರು ಇತ್ಯಾದಿ ಪದ ಬಳಕೆ ಮಾಡಿದ್ದಾರೆ. ಈ ಹೇಳಿಕೆಯನ್ನು ಯುಟ್ಯೂಬರ್ ಸಮೀರ್ ಆಧಾರರಹಿತ್ ಪ್ರಸಾರ ಮಾಡಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣ ತನಿಖೆ ವಿಚಾರ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ.
ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋ ಪ್ರಸಾರ ಮಾಡಿದ ಆರೋಪ. ಇದೆ ಯುಟ್ಯೂಬರ್ ಸಮೀರ್ ವಿರುದ್ಧ ಗಿರೀಶ ಮಟ್ಟೆಣ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.














