Saturday, April 25, 2026
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 12 ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ -ಕಹಳೆ ನ್ಯೂಸ್

ಜಮ್ಮು: ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮಚೈಲ್ ಮಾತಾ ಯಾತ್ರೆಯ ಮಾರ್ಗಮಧ್ಯೆಯ ದೂರದ ಹಳ್ಳಿಯಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ನಂತರ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಈಗ ಪರಿಸ್ಥಿತಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ. ದೊಡ್ಡ ಪ್ರಮಾಣದ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಕೈಗೊಳ್ಳಲು ತಂಡಗಳು ಮತ್ತು ಸಂಪನ್ಮೂಲಗಳನ್ನು ಸ್ಥಳಕ್ಕೆ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ.

‘ಚಸೋಟಿ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸಿವಿಲ್, ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.