ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ -ಕಹಳೆ ನ್ಯೂಸ್

ಪುತ್ತೂರು : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ವತಿಯಿಂದ 79ನೇ ಸ್ವಾತಂತ್ರೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ಮಾಡಿ ರಾಷ್ಟ್ರಗೀತೆಹಾಡುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು ಸ್ವಂತಂತ್ರದ ಮಹತ್ವವನ್ನು ತಿಳಿಸಿ ಸಂಘದ ಸದಸ್ಯರಿಗೆ ಅಭಿನಂದಿಸಿದರು. ಗೌರವಧ್ಯಕ್ಷರಾದ ವೆಂಕಟ್ರಯ ಪ್ರಭು,. ಸಂಘದ ಅಧ್ಯಕ್ಷರಾದ ನಿತಿನ್ ಕುಮಾರ್, ಚೆನ್ನಪ್ಪ ಕೋಟ್ಯಾನ್ ತೋಟ, KNB ಮಾಲಕರಾದ ನವಾಜ್, ಚಂದ್ರಶೇಖರ ಸಾಲ್ಯಾನ್ ಉಪಸ್ಥಿತರಿದ್ದರು. ಯೋಗೀಶ್ ತೋಟ ಕಾರ್ಯಕ್ರಮ ನಿರ್ವಹಿಸಿದರು.
ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.









