
ಮೈಸೂರು : ಪ್ರವಾಸಿಗರೇ ಗಮನಿಸಿ…..ಇಂದುಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ. ಸೆ.22 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ.














