ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತೂರಿನಲ್ಲಿ ವಿದ್ಯಾನಿಧಿ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತೂರಿನ ವಾತ್ಸಲ್ಯ ಪಲಾನುಭವಿಯಾದ ಅರುಣ್ ಕುಮಾರ್ ಇವರ ಮಗನಾದ ರಿತೇಶ್ ನ ವಿದ್ಯಾಭ್ಯಾಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ಮಂಜೂರಾಗಿದ್ದು , ಮಾಣಿ ವಲಯದ ಜನಜಾಗೃತಿ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ , ವಿತರಿಸಿದರು.
ಬೀಡಿನಮಜಲು ಶ್ರೀ ಆದಿ ಪರಾಶಕ್ತಿ ದೇವಸ್ಥಾನದ ಗೌರವಾಧ್ಯಕ್ಷರಾದ ಸುರೇಶ್ ಮುಕ್ಕಡ ,ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪಾ, ಸೇವಾ ಪ್ರತಿನಿಧಿ ಸುಗಂಧಿನಿ ಒಕ್ಕೂಟದ ಜೊತೆ ಕಾರ್ಯದರ್ಶಿ ಸವಿತಾ,ಸಂಘದ ಸದಸ್ಯರು ಉಪಸ್ಥಿತರಿದ್ದರು.









