
– ಇಂದ್ರಾಳಿ ಬ್ರಿಡ್ಜ್ ಉದ್ಘಾಟಿಸಲಿರುವ ವಿ.ಸೋಮಣ್ಣ
– ಟೀಕಿಸಿದವರಿಗೆ ಸ್ವಾಗತ- ಸಾರ್ವಜನಿಕರಿಗೆ ಸುಸ್ವಾಗತ ಎಂದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ, ಆರೋಪ ಪ್ರತ್ಯಾರೋಪ ಶವ ಮೆರವಣಿಗೆ, ತಲೆ ಬೋಳಿಸಿ ಪ್ರತಿಭಟಿಸೋದು ಸಾಮಾನ್ಯ. ಈ ಎಲ್ಲದರ ನಡುವೆ ಸುಸಜ್ಜಿತವಾದ ಉಕ್ಕಿನ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಸಿದ್ಧವಾಗಿದೆ. ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬನ್ನಿ ಎಂದು ಸಾರ್ವಜನಿಕರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಉಡುಪಿ ನಗರದ ಎರಡು ದಶಕದ ಕನಸೊಂದು ನನಸಾಗುತ್ತಿದೆ. ಮಲ್ಪೆಯಿಂದ ಚಿತ್ರದುರ್ಗದ ಮೊಳಕಾಲ್ಮೂರು ನಡುವೆ ರಾಷ್ಟ್ರೀಯ ಹೆದ್ದಾರಿ 169 ಎ ನಿರ್ಮಾಣ ಆಗುತ್ತಿದೆ. ಉಡುಪಿಯ ಇಂದ್ರಾಳಿ ಬಳಿ ರೈಲ್ವೆ ಟ್ರ್ಯಾಕ್ ಹಾದು ಹೋಗುತ್ತದೆ. ಹೆದ್ದಾರಿಯಲ್ಲಿ ರೈಲ್ವೆ ಬ್ರಿಜ್ ಎರಡು ಇಲಾಖೆಯ ಸುಪರ್ದಿಗೆ ಬರೋದ್ರಿಂದ ಹಲವಾರು ತಾಂತ್ರಿಕ ಸಮಸ್ಯೆಗಳಾಗಿತ್ತು. ಸುಮಾರು ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಗ್ಗೆ ಸಾಕಷ್ಟು ಹೋರಾಟಗಳಾಗಿತ್ತು.














