Friday, March 13, 2026
ಸುದ್ದಿ

ಕು. ಸಂಜನಾ ಎಸ್ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಆರನೇ ಸ್ಥಾನದ ಪ್ರತಿಭೆಗೆ ಗುರು ಅನುಗ್ರಹ- ಕಹಳೆ ನ್ಯೂಸ್

ಪೆರ್ನಾಜೆ: ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೋಳ್ಯ ಕೆರೆ ನೂಜಿಯ ಸದಾಶಿವ ಭಟ್ ಮತ್ತು ಸರೋಜಿನಿ ದಂಪತಿಗಳ ಪುತ್ರಿ ಡಾ .ವಿದ್ಯಾ ಸರಸ್ವತಿ ಪಿ ಎಸ್ ಮತ್ತು ಗಣೇಶ್ ರಾಮಚಂದ್ರ ದಂಪತಿಯ ಪುತ್ರಿ ಸಂಜನಾ ಎಸ್ ಗಣೇಶ್ ರವರು ಬೆಂಗಳೂರು ನಿವಾಸಿಯಾಗಿದ್ದು,
ಪಿಯುಸಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಲ್ಲಿ 595 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಇವರನ್ನು ವಿಜಯನಗರ ವಲಯದ ವತಿಯಿಂದ ಅ . 12ರಂದು ಗಿರಿನಗರದ ರಾಮಾಶ್ರಮದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶ್ರೀ ಸಂಸ್ಥಾನದವರಿಂದ ಶಾಲು ಪ್ರಸಂಶ ಪತ್ರ ಫಲ, ವಿಶೇಷ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು ತಮ್ಮ ಸಾಧನೆ ಮೂಲಕ ತಮಗೆಲ್ಲ ಹೆಮ್ಮೆ ಮೂಡಿಸಿದ ಕು.ಸಂಜನಾ ಎಸ್ ನಮ್ಮೂರಿನ ಅರಳು ಪ್ರತಿಭೆ ಎಂಬ ಹೆಮ್ಮೆ ಪ್ರಸ್ತುತ ಬೆಂಗಳೂರಿನ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (kins)ನಲ್ಲಿ ಮುಂದಿನ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು